ಗಮನಿಸಬೇಕಾದ ಸಂಗತಿಯೆಂದರೆ, ಅಪಘಾತ ನಡೆದ ಸಂಗತಿ ಗೊತ್ತಾದ ಕೂಡಲೇ ಸ್ಥಳೀಯ ಶಾಸಕರೂ ಆಗಿರುವ ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಕಾರ್ಯಕರ್ತರನ್ನು ಸ್ಥಳಕ್ಕೆ ಕಳಿಸಿ ಅಪಘಾತಕ್ಕೀಡಾದ ಜನರಿಗೆ ನೆರವಾಗಿದ್ದಾರೆ. ಮೃತ ದುರ್ದೈವಿಗಳು ಹಾಗೂ ಗಾಯಗೊಂಡಿರುವ ಕುಟುಂಬ ಸದಸ್ಯರಿಗೆ ಅಗತ್ಯವಿರುವ ಎಲ್ಲ ನೆರವು ಒದಗಿಸಲಾಗುವುದು ಎಂದು ಒಬ್ಬ ಕಾರ್ಯಕರ್ತ ಹೇಳುತ್ತಾರೆ.