ಸೈದ್ಧಾಂತಿಕವಾಗಿ ಎನ್ ಡಿಎ ಮೈತ್ರಿಕೂಟ ಮತ್ತು ಜೆಡಿಎಸ್ ಪರಸ್ಪರ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿವೆ, ಹಾಗಾಗಿ ತಮ್ಮ ಪಕ್ಷ ಎನ್ಡಿಎನೊಂದಿಗೆ ಬೆರೆಯುವುದು ಸಾಧ್ಯವೇ ಇಲ್ಲ ಎಂದು ಇಬ್ರಾಹಿಂ ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು, ನಿತೀಶ್ ಕುಮಾರ್, ಶರದ್ ಪವಾರ್ ಮೊದಲಾದವರೆಲ್ಲ ತಮ್ಮೊಂದಿಗೆ ಮಾತಾಡಿದ್ದಾರೆ ಎಂದು ಅವರು ಹೇಳಿದರು.