ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ ಶಿವರಾಜ್​ಕುಮಾರ್

ರಾಜ್​ಕುಮಾರ್ ಆರಂಭಿಸಿದ ಶಕ್ತಿಧಾಮದ ಉಸ್ತುವಾರಿ ಶಿವಣ್ಣ ಹಾಗೂ ಗೀತಾ ಶಿವರಾಜ್​ಕುಮಾರ್ ಅವರ ಹೆಗಲೇರಿದೆ. ಹೀಗಾಗಿ ಶಿವರಾಜ್​ಕುಮಾರ್ ಅವರು ಆಗಾಗ ಅಲ್ಲಿಗೆ ತೆರಳುತ್ತಾರೆ. ಇಂದು (ಆಗಸ್ಟ್ 15) ಅವರು ಮೈಸೂರಿಗೆ ತೆರಳಿದ್ದಾರೆ. ಶಕ್ತಿಧಾಮದ ಮಕ್ಕಳ ಜೊತೆ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಸಂಭ್ರಮಿಸಿದ್ದಾರೆ. ಧ್ವಜಾರೋಹಣದ ಬಳಿಕ ಮಕ್ಕಳಿಗೆ ಸಿಹಿ ವಿತರಿಸಲಾಗಿದೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಶಿವರಾಜ್​ಕುಮಾರ್ ಅವರು ರಜನಿಕಾಂತ್ ಜೊತೆ ನಟಿಸಿದ ‘ಜೈಲರ್’ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ.