ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?

ನಟ ಯಶ್​ ಅವರು ಧರ್ಮಸ್ಥಳಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದ ನಂತರ ಅವರರನ್ನು ನೋಡಲು ಫ್ಯಾನ್ಸ್​ ಮುಗಿಬಿದ್ದಿದ್ದಾರೆ. ಈ ವೇಳೆ ಸ್ವಲ್ಪ ನೂಕು ನುಗ್ಗಲು ಉಂಟಾಗಿದೆ. ಸೆಲ್ಫಿಗಾಗಿ ಮುಗಿಬೀಳುವ ಅಭಿಮಾನಿಗಳನ್ನು ನಿಭಾಯಿಸುವುದು ಸುಲಭವಲ್ಲ. ಧರ್ಮಸ್ಥಳದಲ್ಲೂ ಅದೇ ರೀತಿ ಆಗಿದೆ.