ನಟ ಯಶ್ ಅವರು ಧರ್ಮಸ್ಥಳಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿದ್ದಾರೆ. ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದ ನಂತರ ಅವರರನ್ನು ನೋಡಲು ಫ್ಯಾನ್ಸ್ ಮುಗಿಬಿದ್ದಿದ್ದಾರೆ. ಈ ವೇಳೆ ಸ್ವಲ್ಪ ನೂಕು ನುಗ್ಗಲು ಉಂಟಾಗಿದೆ. ಸೆಲ್ಫಿಗಾಗಿ ಮುಗಿಬೀಳುವ ಅಭಿಮಾನಿಗಳನ್ನು ನಿಭಾಯಿಸುವುದು ಸುಲಭವಲ್ಲ. ಧರ್ಮಸ್ಥಳದಲ್ಲೂ ಅದೇ ರೀತಿ ಆಗಿದೆ.