ಬಿವೈ ವಿಜಯೇಂದ್ರ ಸುದ್ದಿಗೋಷ್ಠಿ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಆಪ್ ಸೋಲಾಗಲಿದೆ ಮತ್ತು ಬಿಜೆಪಿ 27-ವರ್ಷಗಳ ನಂತರ ಅಧಿಕಾರಕ್ಕೆ ಬರಲಿದೆ ಎಂದು ಸುಮಾರು 9-10 ಚುನಾವಣಾ ಸಮೀಕ್ಷೆಗಳು ಹೇಳಿವೆ. ಭ್ರಷ್ಟಾಚಾರದ ವಿರುದ್ಧ ಆಂದೋಳನ ನಡೆಸಿ ಅಧಿಕಾರದ ಚುಕ್ಕಾಣಿ ಹಿಡಿದು ಜನರನ್ನು ಗ್ಯಾರಂಟಿ ಯೋಜನೆಗಳ ಮೂಲಕ ಬೇಸ್ತು ಬೀಳಿಸಿದ ಆಪ್ ಗೆ ಈ ಬಾರಿ ತಕ್ಕ ಶಾಸ್ತಿಯಾಗಲಿದೆ ಎಂದು ವಿಜಯೇಂದ್ರ ಹೇಳಿದರು.