ದುರ್ಗಾಪರಮೇಶ್ವರಿ ರಥೋತ್ಸವ ವೇಳೆ ಅವಘಡ: ತೇರಿನ ಮೇಲ್ಭಾಗ ಏಕಾಏಕಿ ಕುಸಿತ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ. ಮಧ್ಯರಾತ್ರಿ ರಥದ ಮೇಲ್ಭಾಗ ಏಕಾಏಕಿ ಕುಸಿದಿದ್ದು, ಅರ್ಚಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸದಿರುವುದು ಸಂತೋಷದ ಸಂಗತಿ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.