ರಾಮನಗರ: ವಿಭೂತಿಕೆರೆಯಲ್ಲಿ ಬರ ಅಧ್ಯಯನದ ವೇಳೆ ಜಗಳ ಮಾಡಿಕೊಂಡ ಬಿಜೆಪಿ ನಾಯಕರು
ರಾಮನಗರ ತಾಲೂಕಿನ ವಿಭೂತಿಕೆರೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಬಿಜೆಪಿ ಎಂಎಲ್ಸಿ ಆ.ದೇವೇಗೌಡ ಹಾಗೂ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಜಯರಾಂ ನಡುವೆ ವೈಯಕ್ತಿಯ ವಿಚಾರವಾಗಿ ಪರಸ್ಪರ ಜಗಳ ಮಾಡಿಕೊಂಡಿದ್ದಾರೆ. ಮಾಜಿ ಸಚಿವ ಕೋಟಾ ಶ್ರೀನಿವಾಸಪೂಜಾರಿ ಎದುರೇ ನಾಯಕರು ಬೈದಾಡಿಕೊಂಡಿದ್ದಾರೆ.