ಬಸವರಾಜ ಬೊಮ್ಮಾಯಿಗೆ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿತ್ತು ಮತ್ತು ಅವರೀಗ ಶಾಸಕರೂ ಆಗಿದ್ದಾರೆ, ತಾನಾದರೋ ಸೋತು ಮನೆಯಲ್ಲಿ ಉಳಿಯುವ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಟಿಕೆಟ್ ತನಗೆ ಮಾತ್ರ ನೀಡಬೇಕು. ತನ್ನ ಮೌನವನ್ನು ಬಿಜೆಪಿ ನಾಯಕರು ದೌರ್ಬಲ್ಯವೆಂದು ಪರಿಗಣಿಸಬಾರದು ಎಂದು ಪಾಟೀಲ್ ಹೇಳಿದರು. ಒಂದು ವೇಳೆ ಟಿಕೆಟ್ ಸಿಗದಿದ್ದರೆ ಬೆಂಬಲಿಗರನ್ನು ಮತ್ತು ಕಾರ್ಯಕರ್ತರನ್ನು ಕೇಳಿ ಮುಂದಿನ ನಡೆ ನಿರ್ಧರಿಸುವುದಾಗಿ ಪಾಟೀಲ್ ಹೇಳಿದರು.