ಬೆಂಗಳೂರಿನ ಆರ್.ಟಿ.ನಗರದ ವ್ಯಕ್ತಿಯೊಬ್ಬ ಪತ್ನಿಯ ಕಿರುಕುಳಕ್ಕೆ ಬೇಸತ್ತು ರಾಜಭವನದ ಎದುರು ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರು ದೂರು ದಾಖಲಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಆರೋಪಿಸಿದ್ದಾರೆ. ಸ್ಥಳೀಯರು ವ್ಯಕ್ತಿಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತ್ಮಹತ್ಯೆಗೆ ಮುನ್ನ ಅವರು ಡೆತ್ ನೋಟ್ ಬರೆದಿದ್ದಾನೆ.