ನಟ ದರ್ಶನ್ ಅವರ ಜೊತೆ ಆಪ್ತ ಒಡನಾಟ ಹೊಂದಿರುವ ತರುಣ್ ಸುಧೀರ್ ಅವರು ಇದೇ ಮೊದಲ ಬಾರಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಲವು ವರ್ಷಗಳಿಂದ ದರ್ಶನ್ ಮತ್ತು ತರುಣ್ ಸುಧೀರ್ ಕುಟುಂಬದ ನಡುವೆ ಆತ್ಮೀಯತೆ ಇದೆ. ಈಗ ದರ್ಶನ್ ಅವರು ಕೊಲೆ ಆರೋಪದಲ್ಲಿ ಜೈಲು ಸೇರಿದ್ದು, ಆ ಕುರಿತು ತರುಣ್ ಸುಧೀರ್ ಭಾವುಕವಾಗಿ ಮಾತನಾಡಿದ್ದಾರೆ.