ನಾಯಿ ದಾಳಿ ಪ್ರಕರಣ: ‘ಮತ್ತೆ ಹೀಗೆ ಆಗದಂತೆ ಎಚ್ಚರ ವಹಿಸುತ್ತೇನೆ’; ಪೊಲೀಸ್​ ಠಾಣೆಗೆ ಬಂದು ದರ್ಶನ್​ ಹೇಳಿಕೆ

ಅಮಿತಾ ಜಿಂದಾಲ್​ ಎಂಬ ಮಹಿಳೆಗೆ ದರ್ಶನ್​ ಮನೆಯ ನಾಯಿ ಕಚ್ಚಿದ ಪ್ರಕರಣದಲ್ಲಿ ಆರ್​ಆರ್​ ನಗರ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇಂದು (ನವೆಂಬರ್​ 15) ನಟ ದರ್ಶನ್​ ಅವರು ಪೊಲೀಸ್​ ಠಾಣೆಗೆ ಬಂದು ತಮ್ಮ ಹೇಳಿಕೆ ನೀಡಿದ್ದಾರೆ. ಕೇವಲ 15 ನಿಮಿಷ ಮಾತ್ರ ಅವರು ಠಾಣೆಯಲ್ಲಿ ಇದ್ದರು. ಈ ವೇಳೆ ಅವರು ನೀಡಿದ ಹೇಳಿಕೆ ಇಲ್ಲಿದೆ. ‘ಶೂಟಿಂಗ್​ ಇದ್ದ ಕಾರಣದಿಂದ ನಾನು ಗುಜರಾತ್​ಗೆ ಹೋಗಿದ್ದೆ. ನಾಯಿಯನ್ನು ನೋಡಿಕೊಳ್ಳುವಂತೆ ಕೆಲಸದ ಹುಡುಗರಿಗೆ ಹೇಳಿದ್ದೆ. ನಮ್ಮ ಹುಡುಗರಿಂದ ತಪ್ಪಾಗಿದೆ. ಮಹಿಳೆಗೆ ಚಿಕಿತ್ಸೆ ಕೊಡಿಸುವಂತೆಯೂ ನಮ್ಮ ಹುಡುಗರಿಗೆ ಹೇಳಿದ್ದೇನೆ. ಮತ್ತೆ ಹೀಗೆ ಆಗದಂತೆ ಎಚ್ಚರ ವಹಿಸುತ್ತೇನೆ. ನಾವು ಹೆಚ್ಚಾಗಿ ಈ ಮನೆಯಲ್ಲಿ ವಾಸ ಮಾಡುತ್ತಿಲ್ಲ. ಮನೆಯಲ್ಲಿನ ಸಿಸಿ ಕ್ಯಾಮೆರಾಗಳ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ಈ ಘಟನೆ ಬಳಿಕ ಹೊಸ ಸಿಸಿಟಿವಿ ಹಾಕಿಸಿದ್ದೇನೆ’ ಎಂದು ದರ್ಶನ್​ ಹೇಳಿದ್ದಾರೆ. ಹಾಗಿದ್ದರೂ ಕೂಡ ಸಿಸಿಟಿವಿ ದೃಶ್ಯ ನೀಡುವಂತೆ ಪೊಲೀಸರು ದರ್ಶನ್​ಗೆ ಸೂಚಿಸಿದ್ದಾರೆ.