ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವುದರಿಂದ ಅದನ್ನು ಪ್ರತ್ಯೇಕ ಐಡೆಂಟಿಟಿಯಾಗಿ ಪರಿಗಣಿಸಲಾಗದು. ವನ್ ಆನ್ ವನ್ ಹೋರಾಟದ ಕಾರಣ ಸೂಕ್ತ ಅಭ್ಯರ್ಥಿಯ ಆಯ್ಕೆ ಎರಡೂ ಪಕ್ಷಗಳಿಗೆ ತಲೆನೋವಿನ ಸಂಗತಿಯಾಗಿದೆ. ಕಲಬುರಗಿಯಲ್ಲೂ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಡಾ ಶರಣಪ್ರಕಾಶ್ ಪಾಟೀಲ್ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರು ಸಭೆ ನಡೆಸಿದ್ದಾರೆ.