ಕೊಪ್ಪಳ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ಮತದಾನ ನಡೆದಿದೆ. ಹೀಗಾಗಿ ಯಶಸ್ವಿಯಾಗಿ ಮತದಾನ ಪ್ರಕ್ರಿಯೆ ಮುಗಿಸಿ ಬಂದ ಸಿಬ್ಬಂದಿಗೆ ಹೂಮಾಲೆ ಹಾಕಿ ಸ್ವಾಗತ ಕೋರಿರುವಂತಹ ಅಪರೂಪದ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಗವಿಸಿದ್ದೇಶ್ವರ ಹೈಸ್ಕೂಲ್ನಲ್ಲಿರುವ ಡಿಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿದ ಸಿಬ್ಬಂದಿಗೆ ಅಧಿಕಾರಿಗಳು ಮಾಲಾರ್ಪಣೆ ಮಾಡಿ ಸ್ವಾಗತಿಸಿದ್ದಾರೆ.