ಕೇಂದ್ರದಿಂದ ಬರ ಅಧ್ಯಯನಕ್ಕಾಗಿ ಮೂರು ತಂಡಗಳು ಆಗಮಿಸಿದ್ದು, ಅಧಿಕಾರಿಗಳು 11 ಜಿಲ್ಲೆಗಳ ಪ್ರವಾಸ ಮಾಡಿ, ಬೆಳೆಹಾನಿ ಪರಿಶೀಲಿಸಿದ ಬಳಿಕ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತಾರೆ. ವರದಿಗಳ ಆಧಾರದ ಮೇಲೆ ಕೇಂದ್ರ ಸರ್ಕಾರ ಬರ ಪರಿಹಾರ ನೆರವಿನ ಮೊತ್ತವನ್ನು ನಿರ್ಧರಿಸುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.