ಡಿಕೆ ಶಿವಕುಮಾರ್, ಡಿಸಿಎಂ

ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕು ಎಂಬ ಒಂದೇ ಕಾರಣದಿಂದ ತಮ್ಮ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿತ್ತು. ಆದರೆ, ಕುಮಾರಸ್ವಾಮಿಯವರೇ ಈಗ ಬಿಜೆಪಿಯನ್ನು ತಬ್ಬಿಕೊಂಡಿರೋದು ಎರಡೂ ಪಕ್ಷಗಳಲ್ಲಿ ನಾಯಕತ್ವದ ಕೊರತೆಯನ್ನು ಸೂಚಿಸುತ್ತದೆ ಎಂದು ಶಿವಕುಮಾರ್ ಹೇಳಿದರು.