ತಾನು ಮುಖ್ಯಮಂತ್ರಿಯಾಗಿದ್ದಾಗ ಉತ್ತಮವಾಗಿ ಆಡಳಿತ ನಡೆಸಿದರೂ ಅದಕ್ಕೆ ಗೌರವ ಸಿಗಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರೆಂದು ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಟಿ ಅರಂಭಿಸಿದ ಬಳಿಕ ಕುಮಾರಸ್ವಾಮಿಯವರು ತಮ್ಮ ಕುಟುಂಬದ ಬಗ್ಗೆಯೇ ಹೆಚ್ಚು ಮಾತಾಡಿದ್ದನ್ನು ಇಲ್ಲಿ ಗಮನಿಸಬಹುದು. ದೇವೇಗೌಡರ ಕುಟುಂಬ ರಾಜ್ಯ ರಾಜಕಾರಣಕ್ಕೆ ಅನಿವಾರ್ಯ ಎನ್ನುವ ಧಾಟಿಯಲ್ಲಿ ಅವರು ಮಾತಾಡಿದರು.