ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳೊಂದಿಗೆ ರಾಜಿ ಮಾಡಿಕೊಳ್ಳಲ್ಲ, ದೇಶದ ಐಕ್ಯತೆಗಾಗಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯವರು ತಮ್ಮ ಪ್ರಾಣಗಳನ್ನು ಬಲಿದಾನ ಮಾಡಿದ್ದನ್ನು ಯಾರೂ ಮರೆಯಬಾರದು, ಕಾಂಗ್ರೆಸ್ ಬಡವರು, ದಲಿತರು, ಕೃಷಿಕರು, ಶೋಷಿತರು ಮತ್ತು ಮಹಿಳೆಯರ ಬಗ್ಗೆ ಕಾಳಜಿ ಮತ್ತು ಗೌರವ ಹೊಂದಿರುವ ಪಕ್ಷ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.