ಗಮನಿಸಬೇಕಾದ ಅಂಶವೇನೆಂದರೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶ್ರಾಂತಿ ಸಿಗಲಿ ಎಂಬ ಉದ್ದೇಶದಿಂದ ಅವರ ತಾಯಿ ಮತ್ತು ಸಹೋದರಿಯರು ಆಸ್ಪತ್ರೆಗೆ ಹೋಗುತ್ತಿಲ್ಲ. ಸಚಿವೆ ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸಿ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಡಾ ರವಿ ಪಾಟೀಲ್ ಹೇಳುವ ಪ್ರಕಾರ ರವಿವಾರ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಹುದು. ಅದರೆ ಅವರಿಗೆ ವಿಶ್ರಾಂತಿ ಬೇಕಿರುವುದನ್ನು ಜನ ಮನಗಾಣಬೇಕು.