ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಗಮಿಸಿದ್ದ ಭಕ್ತರು ಮರಳಿ ಊರಿಗೆ ತೆರಳಲು ಶಿವಮೊಗ್ಗ ಬಸ್ ಏರಿದ್ದರು. ಆದರೆ, ಆ ಕೆಎಸ್ಆರ್ಟಿಸಿ ಬಸ್ ಚಾರ್ಮಾಡಿ ಘಾಟ್ ತಿರುವಿನಲ್ಲಿ ಸ್ಟೇರಿಂಗ್ ಜಾಯಿಂಟ್ ಕಟ್ ಆಗಿ ನಿಂತಿದೆ. ಅದೃಷ್ಟವಶಾತ್, ಚಾಲಕನ ಸಮಯಪ್ರಜ್ಞೆಯಿಂದ ಸಂಭಾವ್ಯ ಅಪಘಾತ ತಪ್ಪಿದೆ. ಬದಲಿ ಬಸ್ಗಾಗಿ ಪ್ರಯಾಣಿಕರು ರಸ್ತೆಯಲ್ಲಿಯೇ ಕಾದು ಕುಳಿತಿದ್ದಾರೆ.