ನಿಷೇಧ ನಡುವೆಯೂ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ

ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಖಾಸಗಿ ವಾಹನಗಳ ಪ್ರವೇಶ ನಿಷೇಧವಿದ್ದರೂ, ಮಲಯಾಳಂ ಚಿತ್ರತಂಡವು ಚಿತ್ರೀಕರಣಕ್ಕಾಗಿ ವಾಹನ ಸಮೇತ ಬೆಟ್ಟದ ಮೇಲೆ ಬಂದಿದೆ. ಸ್ಥಳೀಯರಿಗೆ ವಾಹನ ಪ್ರವೇಶ ನಿರ್ಬಂಧಿಸಿರುವ ಅರಣ್ಯ ಇಲಾಖೆ ಚಿತ್ರತಂಡಕ್ಕೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯ ನಿಯಮ ಉಲ್ಲಂಘನೆ ಆರೋಪ ಕೇಳಿಬಂದಿದೆ.