ಮಂಗಳೂರಲ್ಲಿ ಜನರ ಮತ್ತು ವಾಹನಗಳ ಓಡಾಟ ನೋಡಿ ಎಲ್ಲ ಮಾಮೂಲಿನಂತಿದೆ ಅನಿಸೋದು ನಿಜವಾದರೂ ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಬೂದಿ ಮುಚ್ಚಿದ ಕೆಂಡದಂಥ ಸ್ಥಿತಿ ಇದೆ. ಮೇ 1 ರಂದು ಹಂತಕರಿಗೆ ಬಲಿಯಾದ ಸುಹಾಸ ಶೆಟ್ಟಿಯ ಅಂತಿಮ ಸಂಸ್ಕಾರ ನಿನ್ನೆ ನೆರವೇರಿತು. ಜಿಲ್ಲಾಡಳಿತ ಮೇ 6 ರವರೆಗೆ ಸೆಕ್ಷನ್ 144ಜಾರಿಯಲ್ಲಿಟ್ಟಿದೆ, ಜನ ಗುಂಪುಗಳನ್ನು ಕಟ್ಟಿಕೊಂಡು ಓಡಾಡುವಂತಿಲ್ಲ.