ಇನ್ನೊಬ್ಬ ಅಸಮಾಧಾನಿತ ಬಿಜೆಪಿ ನಾಯಕ ವಿ ಸೋಮಣ್ಣ ಅವರೊಂದಿಗೆ ಮಾತಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನವನ್ನು ಯಡಿಯೂರಪ್ಪ ಮಾಡುತ್ತಿದ್ದಾರೆ. ಆದರೆ ಯಡಿಯೂರಪ್ಪನವರೇ ಹೇಳುವಂತೆ ಸೋಮಣ್ಣ ಕರೆ ಸ್ವೀಕರಿಸುತ್ತಿಲ್ಲ. ಅರವಿಂದ ಲಿಂಬಾವಳಿ ಮತ್ತು ರಮೇಶ್ ಜಾರಕಿಹೊಳಿ ಸಹ ವಿಜಯೇಂದ್ರ ರಾಜ್ಯಾಧ್ಯಕ್ಷ ಆದಾಗಿನಿಂದ ಅಸಮಾಧಾನದಿಂದ ಕುದಿಯುತ್ತಿದ್ದಾರೆ.