ದೆಹಲಿಯಲ್ಲಿ ಸತೀಶ್ ಜಾರಕಿಹೊಳಿ

ಬರ ಪರಿಹಾರ ನಿಧಿಗಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮೂರು ಬಾರಿ ದೆಹಲಿಗೆ ಬಂದಿದ್ದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಒಮ್ಮೆ ಬಂದು ಪ್ರಧಾನ ಮಂತ್ರಿ ಮತ್ತು ಗೃಹ ಮಂತ್ರಿಯವರನ್ನು ಭೇಟಿಯಾಗಿದ್ದಾರೆ. ಆದರೆ ಇದುವರೆಗೆ ಬರ ಪರಿಹಾರ ಹಣ ಬಿಡುಗಡೆಯಾಗಿಲ್ಲ, ಅನುದಾನ ಬಿಡುಗಡೆಗೆ ಯಾವ ಮಾರ್ಗಸೂಚಿಗಳಿವಿಯೋ ಅವುಗಳನ್ನು ಆಧರಿಸಿ ನಮ್ಮ ಪಾಲು ನಮಗೆ ನೀಡಲಿ ಎಂದು ಜಾರಕಿಹೊಳಿ ಹೇಳಿದರು.