ಅವಕಾಶಗಳು ಸಿಕ್ಕಾಗ ಅವುಗಳನ್ನು ಸದುಪಯೋಗ ಮಾಡಿಕೊಳ್ಳಬೇಕು, ತನಗೆ ಅವಕಾಶ ಸಿಕ್ಕ ಕಾರಣ ಓದಿ ವಿದ್ಯಾವಂತನಾದೆ, ಆದರೆ ತನ್ನ ಸಹೋದರರು ಓದದ ಕಾರಣ ಉಳುಮೆ ಮಾಡುತ್ತಾರೆ ಎಂದು ಅವರು ಹೇಳಿದರು. ವೇದಿಕೆ ಮೇಲೆ ಆಸೀನರಾಗಿದ್ದ ಸ್ವಾಮೀಜಿಯವರು ಮಕ್ಕಳಿಗೆ ಶಿಕ್ಷಣ ಒದಗಿಸುತ್ತಿರುವುದನ್ನು ಶ್ಲಾಘಿಸಿದ ಸಿದ್ದರಾಮಯ್ಯ ವಿದ್ಯೆಯು ಸ್ವಾಭಿಮಾನದ ಬದುಕು ನಡೆಸಲು ನೆರವಾಗುತ್ತದೆ ಎಂದು ಹೇಳಿದರು.