ಹಾಗೆಯೇ ಪತ್ರಕರ್ತರೊಬ್ಬರು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿಸುತ್ತೀರಾ ಅಂತ ಪದೇಪದೆ ಕೇಳಿದರೂ ವಿಜಯೇಂದ್ರ ಆ ಪ್ರಶ್ನೆಯನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿದರು. ಒಟ್ಟಿನಲ್ಲಿ, ಅವರ ಅರ್ಧಂಬರ್ಧ ಮಾತುಗಳಿಂದ ಒಂದು ಅಂಶ ಸ್ಪಷ್ಟವಾಗುತ್ತದೆ; ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಸಿಗೋದು ಕಷ್ಟ.