ಕೆಎಸ್ ಈಶ್ವರಪ್ಪ, ಬಿಜೆಪಿ ನಾಯಕ

ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು, ಹಿಂದೂಗಳೇನಾದರೂ ತಿರುಗಿ ಬಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತದೆ ಎಂದು ಈಶ್ವರಪ್ಪ ಹೇಳಿದರು. ಹಿಂದೂ ಕುಟುಂಬಗಳಿಗೆ ಧೈರ್ಯವಾಗಿರುವಂತೆ ವಿಶ್ವಾಸ ತುಂಬಿದ್ದೇವೆ ಎಂದು ಹೇಳಿದ ಅವರು ಅಮಾಯಕರಿಗೆ ತೊಂದರೆ ಕೊಡಬೇಡಿ ಅಂತ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಲಾಗಿದೆ ಎಂದರು.