ಸರ್ಕಾರದ ಹಗರಣಗಳ ಹಿನ್ನೆಲೆಯಲ್ಲಿ ನಾಳೆ ಬಿಜೆಪಿ ಶಾಸಕರು ಪ್ರತಿಭಟನೆಯ ಭಾಗವಾಗಿ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕುಲಾಗುವುದೆಂದು ಶಾಸಕ ಸುನೀಲ ಕುಮಾರ್ ಹೇಳಿದರು. ಜುಲೈ 15ರಿಂದ ಆರಂಭವಾಗಲಿರುವ ವಿಧಾನಸಭಾ ಅಧಿವೇಶನದಲ್ಲಿ ಎಲ್ಲ ಅಂಕಿ-ಅಂಶ ಮತ್ತು ದಾಖಲೆಗಳೊಂದಿಗೆ ಸರ್ಕಾರದ ಹಗರಣಗಳನ್ನು ಸದನದಲ್ಲಿ ಪ್ರಸ್ತಾಪಿಸುವುದಾಗಿ ಅವರು ಹೇಳಿದರು.