ದಾವಣಗೆರೆ: ರೈಲು ನಿಲ್ದಾಣದ ಪ್ಲಾಟ್ಫಾರ್ಮ್ಗೆ ವಾಸ್ಕೋ ರೈಲು ಆಗಮಿಸುತ್ತಿದ್ದಂತೆ ಹಳಿ ದಾಟಲು ಹೋಗಿ ಹಳಿಯಲ್ಲೇ ಸಿಲುಕಿಕೊಂಡ ವೃದ್ಧನನ್ನು ಆರ್ಪಿಎಫ್ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ರೈಲು ಬರುತ್ತಿರುವುದನ್ನು ಗಮನಿಸದೇ ನೇರವಾಗಿ ಪ್ಲಾಟ್ಫಾರ್ಮ್ನಿಂದ ಹಳಿಗೆ ಇಳಿದ ವೃದ್ಧ ರಂಗಪ್ಪ ಸಮೀಪ ಬಂದ ರೈಲು ನೋಡಿ ಭಯಗೊಂಡು ಮತ್ತೆ ಪ್ಲಾಟ್ಫಾರ್ಮ್ಗೆ ಏರಲು ಮುಂದಾಗಿದ್ದಾರೆ. ಅಷ್ಟರಲ್ಲಿ ನೆರವಗಿಗೆ ದಾವಿಸಿದ ಆರ್ಪಿಎಫ್ ಕಾನ್ಸ್ಟೇಬಲ್ ಶಿವಾನಂದ, ವೃದ್ಧನನ್ನು ಎಳೆದು ಹಳಿಯಿಂದ ಹೊರಕ್ಕೆ ಕೊಂಡೊಯ್ದಿದ್ದಾರೆ.