ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರಿಗೆ ವಿಪರೀತ ಬೆನ್ನು ನೋವು ಕಾಡುತ್ತದೆ. ಆದ್ದರಿಂದ ಅವರಿಗೆ ಮೆಡಿಕಲ್ ಬೆಡ್ ಹಾಗೂ ದಿಂಬು ನೀಡಲಾಗಿದೆ. ವಿಮ್ಸ್ ನ್ಯೂರೋ ಸರ್ಜನ್ ಡಾ. ವಿಶ್ವನಾಥ್ ಅವರು ಬೆಡ್ ಮತ್ತು ದಿಂಬು ನೀಡುವಂತೆ ವರದಿಯಲ್ಲಿ ಉಲ್ಲೇಖಿಸಿದ್ದರು. ಜಿಲ್ಲಾ ಆಸ್ಪತ್ರೆಯಿಂದ ಆ್ಯಂಬುಲೆನ್ಸ್ ಮೂಲಕ ಈ ವಸ್ತುಗಳನ್ನು ತರಿಸಲಾಗಿದೆ.