ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್ಸ್ಪಕ್ಟರ್ ಮತ್ತು ಡಿವೈಎಸ್ಪಿಯನ್ನು ಅಮಾನತು ಮಾಡಲಾಗಿದೆ. ಪೊಲೀಸರ ಮೇಲೆ ಕ್ರಮ ಏಕೆ ಎಂದು ಸಿಎಂ ಸಿದ್ದರಾಮಯ್ಯರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಶ್ನೆ ಮಾಡಿದ್ದಾರೆ. ಯಾರೇ ಗಲಭೆ ಮಾಡಿದ್ರೂ ತಪ್ಪು ಅದನ್ನು ಖಂಡಿಸಿ. ಈ ವಿಚಾರದಲ್ಲಿ ಪೊಲೀಸ್ ನೈತಿಕತೆ ಕುಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.