ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಸಿಲುಕಿ ಹೈರಾಣು

ನಟ ದರ್ಶನ್​ ಅವರ ಕುಟುಂಬದವರು ಹಲವು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಅತ್ತ, ದರ್ಶನ್​ ಪತ್ನಿ ವಿಜಯಲಕ್ಷ್ಮಿ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದ್ದರೆ, ಇತ್ತ ದರ್ಶನ್​ ಸಹೋದರ ದಿನಕರ್ ತೂಗುದೀಪ ಅವರು ಮೈಸೂರಿನಲ್ಲಿ ಚಾಮುಂಡೇಶ್ವರಿಯ ದರ್ಶನಕ್ಕೆ ಬಂದಿದ್ದಾರೆ. ದಿನಕರ್ ತೂಗುದೀಪ ಅವರ ಫ್ಯಾಮಿಲಿ ಜೊತೆ ನಟ ಚಿಕ್ಕಣ್ಣ ಕೂಡ ಸಾಥ್ ನೀಡಿದ್ದಾರೆ. ದೇವಸ್ಥಾನದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು ನೆರೆದಿದ್ದರು. ಜನಜಂಗುಳಿಯಲ್ಲಿ ಸರದಿ ಸಾಲಿನಲ್ಲಿ ನಿಂತ ದಿನಕರ್​, ಚಿಕ್ಕಣ್ಣ ಮುಂತಾದವರು ಹೈರಾಣಾದರು. ಅದರ ನಡುವೆಯೂ ಚಿಕ್ಕಣ್ಣ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಈ ಸಂದರ್ಭದ ವಿಡಿಯೋ ಇಲ್ಲಿದೆ.