ಅಸಲಿಗೆ ರಾಜರಾಜೇಶ್ವರಿ ನಗರದಲ್ಲಿ ನಡೆದ ಕಾಮಗಾರಿಗಳಲ್ಲಿ ಭಾರಿ ಪ್ರಮಾಣದ ಅಕ್ರಮ (irregularities) ನಡೆದಿದೆ ಮತ್ತು ಕಳಪೆ ಕಾಮಗಾರಿ ಬಗ್ಗೆಯೂ ಸಾಕಷ್ಟು ದೂರುಗಳು ಕೇಳಿಬಂದ ಬಳಿಕ ಲೋಕಾಯುಕ್ತ ತನಿಖೆ ನಡೆಸುತ್ತಿದೆ. ಸುಮಾರು 120 ಕೋಟಿ ರೂ.ಗಳಷ್ಟು ಅವ್ಯವಹಾರ ನಡೆದಿರುವ ವಿಷಯ ಬಯಲಾಗಿದೆ. ಇದೇ ಕಾರಣಕ್ಕೆ ಅನುದಾನವನ್ನು ತಡೆಹಿಡಿಯಲಾಗಿದೆಯೇ ಬೇರಾವ ಕಾರಣಕ್ಕೂ ಅಲ್ಲ ಎಂದು ಕುಸುಮಾ ಹೇಳಿದರು.