ತಪ್ಪೆಲ್ಲ ಅಧಿಕಾರಿಗಳದ್ದೇ ಎಂಬಂತೆ ಮುಖ್ಯಮಂತ್ರಿ ಮಾತಾಡುತ್ತಾರೆ, ಆಫ್ ಕೋರ್ಸ್ ಅಧಿಕಾರಿಗಳ ಬೇಜವಾಬ್ದಾರಿತನ, ಉಡಾಫೆ ಮಾತು ಬೆಂಗಳೂರು ನಿವಾಸಿಗಳಿಗೆ ಅರ್ಥವಾಗುತ್ತಿದೆ. ಆದರೆ ಸರ್ಕಾರ ಏನು ಮಾಡುತ್ತಿದೆ, ರಾಜ್ಯದ ರಾಜಧಾನಿಯನ್ನು ಈ ಸ್ಥಿತಿಯಲ್ಲಿಟ್ಟುಕೊಂಡು ದೂರದ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡಿದರೆ ಅದಕ್ಕೇನಾದರೂ ಅರ್ಥವಿದೆಯಾ ಎಂದು ಕನ್ನಡಿಗರು ಪ್ರಶ್ನಿಸುತ್ತಿದ್ದಾರೆ.