ಮೈಸೂರು-ಉದಯ್ಪುರ ಪ್ಯಾಲೇಸ್ ಕ್ವೀನ್ ಎಕ್ಸ್ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಉದಯ್ಪುರಕ್ಕೆ ಹೊರಟಿದ್ದ ರೈಲು ಬೆಂಗಳೂರು ದಕ್ಷಿಣ ಜಿಲ್ಲೆಯ ಚೆನ್ನಪಟ್ಟಣದ ತಾಲೂಕಿನ ವಂದಾರಗುಪ್ಪೆ ಬಳಿ ನಿಲ್ಲಿಸಿ ಬೆಂಕಿ ನಂದಿಸಲಾಯಿತು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಹಾಗೂ ರೈಲ್ವೆ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ. ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.