ಅವರು ಆಸ್ಪತ್ರೆಯಲ್ಲಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವಾರು ಗಣ್ಯರು ಅಲ್ಲ್ಲಿಗೆ ತೆರಳಿ ಆರೋಗ್ಯ ವಿಚಾರಿಸಿ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ವಿಜಯೇಂದ್ರಗೆ ಆಸ್ಪತ್ರೆಗೆ ಹೋಗುವುದು ಸಾಧ್ಯವಾಗಿರಲಿಲ್ಲ. ಒಂದರ್ಥದಲ್ಲಿ ಅದು ಒಳ್ಳೆಯದೇ. ಯಾಕೆಂದರೆ, ಅಸ್ವಸ್ಥತೆಗೊಳಗಾಗಿ ಆಸ್ಪತ್ರೆ ಸೇರುವ ಯಾರೇ ಆಗಲಿ, ಅವರಿಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ.