ಇತರ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ ಪ್ರವಾಸಿಗರು ಸಂಚಾರಕ್ಕೆ ಅಡಚಣೆಯಾಗುವಂತೆ ಕಾರುಗಳನ್ನು ನಿಲ್ಲಿಸಿಕೊಂಡು ರಸ್ತೆ ಮಧ್ಯೆಯೇ ಹುಚ್ಚಾಟವಾಡಿದ ಘಟನೆ ಚಿಕ್ಕಮಗಳೂರಿನ ದೇವರಮನೆಯಲ್ಲಿ ನಡೆದಿದೆ. ಮತ್ತೊಂದೆಡೆ, ಚಾರ್ಮಾಡಿ ಘಾಟಿಯಲ್ಲಿ ರಸ್ತೆ ಬದಿ ವಾಹನ ನಿಲ್ಲಿಸಿ ಪ್ರಯಾಣಿಕರು, ಪ್ರವಾಸಿಗರು ಜಾರುಬಂಡೆಗಳ ಮೇಲೆ ಹತ್ತಿ ಹುಚ್ಚಾಟ ಮಾಡುತ್ತಿರುವುದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ.