ತೆರಿಗೆ ಹಂಚಿಕೆಯನ್ನು ಫಲಾನುಭವಿಗಳಿಗೆ ಅರ್ಥವಾಗುವಂತೆ ವಿವರಿಸಿದ ಸಿದ್ದರಾಮಯ್ಯ ಕರ್ನಾಟಕದಿಂದ 100 ರೂ. ತೆರಿಗೆ ಹಣ ಕೇಂದ್ರಕ್ಕೆ ಹೋದರೆ ಅಲ್ಲಿಂದ ನಮಗೆ ವಾಪಸ್ಸು ಬರೋದು ಕೇವಲ 13 ರೂ. ಮಾತ್ರ, ಇದು ಅನ್ಯಾಯವಲ್ಲವೇ ಎಂದು ಕೇಳಿದರು. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣವೇ ಇಲ್ಲ ಎಂದು ಆರ್ ಅಶೋಕ ಮತ್ತು ಬಿಎಸ್ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿಎಂ ಹೇಳಿದರು.