ಚಿತ್ರದುರ್ಗ ಜಿಲ್ಲೆಯ ಹೊಟ್ಟಪ್ಪನಹಳ್ಳಿಯಲ್ಲಿ ರೈತರೊಬ್ಬರು ಸಾಕಿದ ಹಸುವನ್ನು ಕಳ್ಳತನ ಮಾಡಿ ಸಾಗಿಸುತ್ತಿದ್ದ ವಿಚಾರ ತಿಳಿದ ಗೋಪನಹಳ್ಳಿ ಗ್ರಾಮದ ರೈತರು ಸಿನಿಮೀಯ ಶೈಲಿಯಲ್ಲಿ ಹಸುವನ್ನು ರಕ್ಷಿಸಿದ್ದಾರೆ. ರೈತರು ದಾಳಿ ನಡೆಸುತ್ತಿದ್ದಂತೆ ಚಾಲಕ ಲಗೇಜ್ ವಾಹನವನ್ನು ಅಡ್ಡಾದಿಡ್ಡಿ ಚಲಾಯಿಸಿ ಕಾರಿಗೆ ಡಿಕ್ಕಿ ಹೊಡೆದಿದ್ದು, ಬಳಿಕ ವಾಹನ ನಿಲ್ಲಿಸಿ ಸ್ಥಳದಿಂದ ಪರಾರಿಯಾಗಿದ್ದಾನೆ.