ತಾಯಿ ಕಳೆದುಕೊಂಡ ವಿಜಯ್​ ರಾಘವೇಂದ್ರ ಪುತ್ರ ಶೌರ್ಯನ ಜತೆ ನಿಂತು ಕಾಳಜಿ ತೋರಿದ ಶ್ರೀಮುರಳಿ ಪತ್ನಿ ವಿದ್ಯಾ

ಸ್ಪಂದನಾ ವಿಜಯ್​ ರಾಘವೇಂದ್ರ ಅವರು ಹೃದಯಾಘಾತದಿಂದ ನಿಧನರಾಗಿದ್ದು ಬಹಳ ನೋವಿನ ಸಂಗತಿ. ಸ್ಪಂದನಾ ಅವರ ಅಗಲಿಕೆ ಬಳಿಕ ವಿಜಯ್​ ರಾಘವೇಂದ್ರ ಅವರ ಕುಟುಂಬದಲ್ಲಿ ದುಃಖ ಆವರಿಸಿದೆ. ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ದಂಪತಿಯ ಮಗ ಶೌರ್ಯ ಕೂಡ ಕಣ್ಣೀರು ಹಾಕುತ್ತಿದ್ದಾನೆ. ಇಂದು (ಆಗಸ್ಟ್​ 16) ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆದಿವೆ. ಈ ವೇಳೆ ಶೌರ್ಯನ ಜೊತೆ ನಿಂತು ಕಾಳಜಿ ವಹಿಸಿದ್ದಾರೆ ಶ್ರೀಮುರಳಿ ಪತ್ನಿ ವಿದ್ಯಾ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯಿತು. ಬಳಿಕ ಮಲ್ಲೇಶ್ವರದ ಮೈದಾನದಲ್ಲಿ ಅಭಿಮಾನಿಗಳಿಗೆ ಭೋಜನ ವ್ಯವಸ್ಥೆ ಮಾಡಲಾಯಿತು.