ನಗರದ ಕೆಂಗೇರಿ ಬಳಿಯ ತುರಹಳ್ಳಿ ಮೀಸಲು ಬಿ.ಎಂ. ಕಾವಲು ಬಫರ್ ವಲಯದಲ್ಲಿ 60 ಕೋಟಿ ರೂ. ಮೌಲ್ಯದ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಿ ಜಪ್ತಿ ಮಾಡಿಕೊಳ್ಳಲಾಗಿದೆ. ನಿನ್ನೆ ಸಭೆ ನಡೆಸಿ ಒತ್ತುವರಿ ತೆರವುಗೊಳಿಸಲು ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದರು. ಹಾಗಾಗಿ 6.5 ಎಕರೆ ಒತ್ತುವರಿ ಭೂಮಿ ತೆರವು ಮಾಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.