ಮಾವು ಬೆಳೆಗಾರರು ಶ್ರೀನಿವಾಸಪುರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಕಲ್ಲುಗಳನ್ನು ಇಟ್ಟು ಬಂದ್ ಮಾಡಿರುವರೆಂದು ನಮ್ಮ ವರದಿಗಾರ ಮಾಹಿತಿ ನೀಡಿದ್ದಾರೆ. ತಾಡಿಗೋಳ ಕ್ರಾಸ್, ರೋಜರನಹಳ್ಳಿ ಕ್ರಾಸ್ ಸೇರಿ ಹಲವೆಡೆ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿ ಸ್ಥಳಕ್ಕೆ ಬರಲು ಮತ್ತು ಬೆಂಬಲ ಬೆಲೆ ಘೋಷಣೆ ಮಾಡಲು ಅವರು ಒತ್ತಾಯಿಸುತ್ತಿದ್ದಾರೆ.