ಪ್ರಧಾನಿ ನರೇಂದ್ರ ಮೋದಿಯವರು ಇಂದು (ಫೆ.25) ರಂದು 110ನೇ ಮನ್ ಕೀ ಬಾತ್ (ರೇಡಿಯೋ ಕಾರ್ಯಕ್ರಮ) ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಬಾಗಲಕೋಟೆಯ ಗೊಂದಲಿ ಪದ ಹಾಡುಗಾರ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಹೊಗಳಿದರು.