ಮುಖ್ಯಮಂತ್ರಿ ಸಿದ್ದರಾಮಯ್ಯ

ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಂತು ಹೋಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿರುವುದಕ್ಕೆ ಉತ್ತರಿಸಿದ ಅವರು, ಅವರೇನು ಜ್ಯೋತಿಷಿಯಾ? ಎಂದು ಕೇಳಿದರು. ಈಗಿನ ಅವಧಿಯ ನಂತರ ಮುಂದಿನ ಅವಧಿಗೂ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಮತ್ತು ಯಾವ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸಿಎಂ ಹೇಳಿದರು.