ಮಕ್ಕಳ ದಣಿವು ತಣಿಸಲು ಏಕಾಂಗಿಯಾಗಿ ಬಾವಿ ತೋಡುತ್ತಿರುವ 55 ವರ್ಷದ ಗೌರಿ

ಆ ಮಹಿಳೆ (Sirsi woman) ಜಮೀನಿನಲ್ಲಿ ನೆಟ್ಟಿದ ಅಡಿಕೆ ಮರಕ್ಕೆ ನೀರು ಹಾಯಿಸಲು, ಏಕಾಂಗಿಯಾಗಿ ಬಾವಿ ತೊಡಿ ಅಡಿಕೆ ಮರಗಳನ್ನು ಉಳಿಸಿ, ಅನೇಕರು ನಿಬ್ಬೆರಗಿಸುವಂತೆ ಮಾಡಿದ್ದರು. ಸದ್ಯ ಶಿರಸಿ ನಗರದ ಅಂಗನವಾಡಿ ಕೇಂದ್ರದ ಮಕ್ಕಳ (anganwadi children) ಕುಡಿಯುವ ನೀರಿನ ಸಮಸ್ಯೆ (drinking water) ನೀಗಿಸಲು, ನಿಸ್ವಾರ್ಥದಿಂದ ಇನ್ನೊಂದು ಬಾವಿ ತೆಗೆಯತ್ತಿದ್ದಾಳೆ. ಅಷ್ಟಕ್ಕೂ ಆ ಮಹಿಳೆ ಯಾರು? ಬಾವಿ ಅಗಿಯೊದು ಹೇಗೆ ಎಂಬುದರ ವರದಿ ಇಲ್ಲಿದೆ ನೋಡಿ. ರಾಜ್ಯದಲ್ಲಿ ಈಗಾಗಲೇ ನೀರಿನ ಹಾಹಾಕರ ಶುರು ಆಗಿದೆ. ಈ ಮಧ್ಯೆ ಕುಡಿಯುವ ನೀರಿನ ಸಲುವಾಗಿ ಇಲ್ಲೊಬ್ಬ ಮಹಿಳೆ.. ಕೈಯಲ್ಲಿ ಗುದ್ದಲಿ ಹಾರೆ ಹಿಡಿದು ಎಕಾಂಗಿಯಾಗಿ ಬಾವಿ ತೋಡುತ್ತಿದ್ದಾಳೆ. ಹೌದು ಈ ದೃಶ್ಯ ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಗಣೇಶ ನಗರದ್ದು.