ಸರಕಾರದ ವೈಫಲ್ಯಗಳ ವಿರುದ್ಧ ಹೋರಾಡಲು, ಜೆಡಿಎಸ್ ಮತ್ತು ಬಿಜೆಪಿ ಜೊತೆಗೂಡುತ್ತಿವೆ ಮತ್ತು ಈ ಬಗ್ಗೆ ಪಕ್ಷಗಳ ಉನ್ನತ ನಾಯಕರ ನಡುವೆ ಮಾತುಕತೆ ನಡೆಯುತ್ತಿವೆ ಎಂದು ಬೊಮ್ಮಾಯಿ ಹೇಳಿದರು. ರಾಜ್ಯದಲ್ಲಿ ಬಿಜೆಪಿ ನಾಯಕತ್ವದ ಬಗ್ಗೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ನೀಡಿದ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದಾಗ, ಶೆಟ್ಟರ್ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡೋದಿಲ್ಲ ಅಂತ ಹೇಳಿದರು.