ಬೆಂಗಳೂರಿನ ಬೀದಿನಾಯಿಗಳಿಗೆ ಬಾಡೂಟ ಹಾಕುವ ಬಿಬಿಎಂಪಿಯ ನಡೆಗೆ ಜನರಿಂದ ಅಸಮಾಧಾನ ವ್ಯಕ್ತವಾಗ್ತಿದೆ. ಇತ್ತ ಕೋಟಿ ಕೋಟಿ ಹಣ ಮೀಸಲಿಟ್ಟು ಬೀದಿನಾಯಿಗಳಿಗೆ ಊಟ ಹಾಕೋಕೆ ಹೊರಟಿರೋ ಪಾಲಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ವಿಭಿನ್ನವಾಗಿ ಪ್ರತಿಭಟನೆ ನಡೆಸೋ ಮೂಲಕ ವ್ಯಂಗ್ಯವಾಡಿದ್ದಾರೆ. ಪಾಲಿಕೆ ಕೇಂದ್ರ ಕಚೇರಿಯ ಮುಂದೆ ನಾಯಿಗಳನ್ನ ಕರೆತಂದ ವಾಟಾಳ್ ನಾಗರಾಜ್, ಬೀದಿನಾಯಿಗಳಿಗೆ ಬಿಸ್ಕೆಟ್ ತಿನ್ನಿಸಿ, ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ವಿಡಿಯೋ ಇಲ್ಲಿದೆ.