ಒಂದು ವೇಳೆ ತನ್ನನ್ನು ಪಕ್ಷದ ರಾಜ್ಯಾಧ್ಯಕ್ಷ ಮಾಡಿದರೆ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷವನ್ನು ಸಂಘಟಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಸೀಟುಗಳನ್ನು ಗೆದ್ದು ಬಿಜೆಪಿ ನಾಯಕರೊಬ್ಬರನ್ನು ಮುಖ್ಯಮಂತ್ರಿಯಾಗುವುದನ್ನು ನೋಡಿಕೊಳ್ಳುತ್ತೇನೆ ಎಂದು ಶ್ರೀರಾಮುಲು ಹೇಳುತ್ತಾರೆ. ಅಸೆಂಬ್ಲಿ ಮತ್ತು ಲೋಕಸಭಾ ಚುನಾವಣೆ ಎರಡರಲ್ಲೂ ಸೋತ ಶ್ರೀರಾಮುಲು ಕರ್ನಾಟಕವನ್ನು ಗೆದ್ದುಕೊಡುವ ಮಾತಾಡುತ್ತಾರೆ!