ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಮಹದೇವಯ್ಯ ಅವರನ್ನು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರಬಹುದೆಂದು ಅನುಮಾನಿಸಲಾಗುತ್ತಿದೆ. ಅವರ ಹತ್ಯೆ ನಡೆಸಲು ಸುಪಾರಿ ನೀಡಲಾಗಿತ್ತು ಎಂಬ ಅಂಶ ಪೊಲೀಸರ ಗಮನಕ್ಕೆ ಬಂದಿದೆ. ಅರಣ್ಯ ಇಲಾಖೆಯ ನೆರವಿನಿಂದ ಪೊಲೀಸರು ರಾಮಾಪುತದ ಕಾಡು ಪ್ರದೇಶದಲ್ಲಿ ಮಹಾದೇವಯ್ಯ ಅವರ ಶವ ಪತ್ತೆ ಮಾಡಿದ್ದಾರೆ.