ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ

ಹಣಕಾಸು ಆಯೋಗವು ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ರಾಜ್ಯದ ವಿಸ್ತೀರ್ಣ, ಅಲ್ಲಿನ ಜನಸಂಖ್ಯೆ, ತಲಾ ಆದಾಯ, ರಾಜ್ಯದ ಒಟ್ಟು ಕಾಡು ಪ್ರದೇಶ ಮತ್ತು ಸಮುದಾಯಗಳ ಅಭಿವೃದ್ಧಿ ಮೊದಲಾದ ಮಾನದಂಡಗಳನ್ನು ಬಳಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹಾಗೆಯೇ, 1971 ಜನಗಣತಿ ವರದಿಯನ್ನು ಗಣನೆಗೆ ತೆಗೆದುಕೊಳ್ಳುವ ಬದಲು, 2011 ರ ಜನಗಣತಿ ವರದಿ ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು.